Connect with us

UDUPI

ಕೋವಿಡ್ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಏಪ್ರಿಲ್ 19 : ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಶನಿವಾರ, ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಪರಿಸ್ಧಿತಿ, ಪರೀಕ್ಷೆಯ, ಸಮುಚ್ಛಿತ ನಡವಳಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಿರುವ ಒಳರೋಗಿಗಳ ಗಂಟಲು ದ್ರವದ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದ ಅವರು ಕೋವಿಡ್-19 ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಿದರು.  ಚುನಾವಣೆ ಸಮೀಪಿಸುತ್ತಿರುವುದರಿಂದ ಸಭೆಗಳಲ್ಲಿ, ಜನ ದಟ್ಟಣೆ ಇರುವಲ್ಲಿ ಹಾಗೂ ಚುನಾವಣಾ ಸಿಬ್ಬಂದಿಗಳ ತರಬೇತಿ ಮುಂತಾದ ಕಡೆಗಳಲ್ಲಿ ಅಗತ್ಯ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.  ಸಭೆಯಲ್ಲಿ ಬೇಸಿಗೆ ಹಾಗೂ ಮುಂಬರುವ ಮಳೆಗಾಲದಲ್ಲಿ ಬರುವ ಇತರೇ ಸಾಂಕ್ರಾಮಿಕ ರೋಗಗಳ ಕುರಿತು ಚರ್ಚಿಸಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *