Connect with us

LATEST NEWS

ಉಡುಪಿಯಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ದತೆಯಲ್ಲಿ ತೊಡಗಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿಯಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ದತೆಯಲ್ಲಿ ತೊಡಗಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿ, ಮಾರ್ಚ್ 8: ಮುಂಬರುವ ಲೋಕ ಸಭಾ ಚುನಾವಣೆ 2019 ರ ಪ್ರಯುಕ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯಲ್ಲಿ ಚುನಾವಣೆ ಸಿದ್ದತೆ ಭರದಿಂದ ಸಾಗಿದ್ದು, ಖುದ್ದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಜಿಲ್ಲೆಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಗಷ್ಟೆ ಹಸೆಮಣೆ ಏರಿದ್ದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಈಗಾಗಲೇ ಕರ್ತವ್ಯಕ್ಕೆ ಹಾಜರಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ದತೆಗಳಲ್ಲಿ ತೊಡಗಿಕೊಂಡಿದ್ದಾರೆ.

ಮಾರ್ಚ್ 7 ರಂದು 122 ಕಾರ್ಕಳ ವಿಧಾನ ಸಭಾ ಕ್ಷೇತ್ರದ ತಹಶೀಲ್ದಾರ್, ಹೆಬ್ರಿ-ತಹಶೀಲ್ದಾರ್, ಕಾರ್ಕಳ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಎಲ್ಲಾ ಸೆಕ್ಟರ್ ಅಧಿಕಾರಿಯವರ ಜೊತೆಗೆ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಗಡಿ ಪ್ರದೇಶ ಹಾಗೂ ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಸಂಬಂಧ ಕಾರ್ಕಳ ತಾಲೂಕಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ನಾಡ್ಪಾಲು ಗ್ರಾಮದ ಸೋಮೇಶ್ವರ ಚೆಕ್ ಪೋಸ್ಟ್ ಮತ್ತು ಮುಡಾರು ಗ್ರಾಮದ ಬಜಗೋಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸ್ಥಳೀಯ ಮತದಾರರ ಚೀಟಿಯನ್ನು ಹೊಂದಿರುವ ಬಗ್ಗೆ ಪರಿಶೀಲಿಸಿದರು.

ನಂತರ ಜಿಲ್ಲಾ ಗಡಿ ಪ್ರದೇಶವಾದ ಈದು ಗ್ರಾಮಕ್ಕೆ ಭೇಟಿ ನೀಡಿದರು. ತದ ನಂತರ ಮಾಳ ಗ್ರಾಮದ ಜಿಲ್ಲಾ ಗಡಿ ಪ್ರದೇಶ ಎಸ್.ಕೆ ಬಾರ್ಡರ್ಗೆ ಹಾಗೂ ಸಾಣೂರು ಗ್ರಾಮದ ಮುರತಂಗಡಿ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪೊಲೀಸ್ ವರಿಷ್ಟಾದಿಕಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ಚರ್ಚಿಸಿ, ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಬಗ್ಗೆ ಸೂಚನೆ ನೀಡಿದರು.

ಕಾರ್ಕಳ ತಾಲೂಕು ಕಚೇರಿಗೆ ಭೇಟಿ ನೀಡಿ ಸೆಕ್ಟರ್ ಅಧಿಕಾರಿಗಳ ಸಭೆ ನಡೆಸಿ ಎಂ.ಸಿ.ಸಿ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಹಾಗೂ ಚುನಾವಣೆಗಳನ್ನು ಯಾವುದೇ ಲೋಪ ದೋಷವಿಲ್ಲದೆ ಎಚ್ಚರಿಕೆಯಿಂದ ಚುನಾವಣಾ ಕಾರ್ಯವನ್ನು ನಡೆಸುವಂತೆ ಹಾಗೂ ಕೆ.ಪಿ.ಎಸ್.ಐ.ಎಸ್ ಆಪ್ ಮೂಲಕ ದಾಖಲಿಸುವಂತೆ ಸೆಕ್ಟರ್ ಅಧಿಕಾರಿಯವರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *