Connect with us

KARNATAKA

ಉಡುಪಿಯಲ್ಲಿ ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆ, 2500 ಜನರ ರಕ್ಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಉಡುಪಿ ಡಿಸಿ ಜಿ ಜಗದೀಶ್ ಮನವಿ ಮಾಡಿದ್ದಾರೆ.

ರಾತ್ರಿ ವೇಳೆ ಮನೆ ಮುಳುಗಡೆ ಯಾದರೆ ರಕ್ಷಣಾಕಾರ್ಯ ಕಷ್ಟವಾಗುತ್ತದೆ ಜಿಲ್ಲಾಡಳಿತದ ಜೊತೆ ಜನ ಕೈಜೋಡಿಸಿ, ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆಯಾಗಿದೆ. ಜಿಲ್ಲೆಯಲ್ಲಿ ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ ಸಾರ್ವಜನಿಕರು ಜನಪ್ರತಿನಿಧಿಗಳು ಸಾವಿರಾರು ಜನ ರಕ್ಷಣೆ ಮಾಡಿದ್ದಾರೆ. ತಗ್ಗು ಪ್ರದೇಶದಲ್ಲಿದ್ದ ಜನ ಸುರಕ್ಷಿತ ತಾಣಗಳಿಗೆ ಶೀಘ್ರ ಬನ್ನಿ ಎಂದು ಉಡುಪಿ ಡಿಸಿ ಜಿ. ಜಗದೀಶ್ ಹೇಳಿದ್ದಾರೆ.

Video:

Share Information
Continue Reading
Advertisement
Click to comment

Leave a Reply

Your email address will not be published. Required fields are marked *