Connect with us

    LATEST NEWS

    ಮದುವೆ ಸಭೆ ಸಮಾರಂಭದಲ್ಲಿ ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಮೊಕದ್ದಮೆ – ಉಡುಪಿ ಜಿಲ್ಲಾಧಿಕಾರಿ ವಾರ್ನಿಂಗ್

    ಉಡುಪಿ ನವೆಂಬರ್ 6: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಇದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು ‘ಈ ಹಿಂದೆ ಕೊರೊನಾ ಪರೀಕ್ಷೆಗೆ ಒಳಪಟ್ಟ ನೂರು ಜನರಲ್ಲಿ 30 ಜನರಿಗೆ ಪಾಸಿಟಿವ್‌ ಬರುತ್ತಿದ್ದವು. ಆದರೆ ಈಗ 100 ಜನರಲ್ಲಿ ಕೇವಲ ಇಬ್ಬರಿಗೆ ಮಾತ್ರ ಸೊಂಕು ಕಂಡು ಬರುತ್ತಿದೆ ಎಂದು ತಿಳಿಸಿದರು.


    ಈ ನಡುವೆ ಈಗ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಸಭೆಗಳು ಮತ್ತು ಕಾರ್ಯಗಳನ್ನು ನಡೆಸಲಾಗುತ್ತಿದೆ. ಆದರೆ ಕೆಲವು ವಿವಾಹ ಕಾರ್ಯಕ್ರಮಗಳಲ್ಲಿ, ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ. ಹೆಚ್ಚು ಜನರು ಸೇರುತ್ತಾರೆ. ಆದ್ದರಿಂದ, ಕಾರ್ಯಕ್ರಮಗಳಿಗಾಗಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯುವ ವ್ಯಕ್ತಿಗಳ ಮೇಲೆ ನಿಗಾ ಇರಿಸಲು ಓರ್ವ ಅಧಿಕಾರಿಯನ್ನು ನೇಮಿಸಲು ನಾವು ಚಿಂತನೆ ನಡೆಸಿದ್ದೇವೆ” ಎಂದು ತಿಳಿಸಿದರು.

    ”ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ತಹಶೀಲ್ದಾರ್‌ ಅವರಿಗೆ ಸೂಚಿಸಲಾಗಿದೆ. ಈ ಬಗ್ಗೆ ನಿಗಾ ವಹಿಸಲು ನೇಮಕಗೊಂಡ ಅಧಿಕಾರಿ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂದು ಕಂಡುಬಂದಲ್ಲಿ ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಜನರ ವಿರುದ್ಧವೂ ನಾವು ಕ್ರಮ ಕೈಗೊಂಡಿದ್ದೇವೆ” ಎಂದು ಹೇಳಿದರು.

    ಪ್ರಸ್ತುತ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಖಾಲಿಯಾಗಿದೆ” ಎಂದು ಹೇಳಿದ ಅವರು, ”ಈ ಹಾಸಿಗೆಗಳು ಖಾಲಿಯಾಗಿಯೇ ಇರಲಿ, ಜನರು ತಮ್ಮ ತಪ್ಪುಗಳಿಂದ ಮತ್ತೆ ಈ ಹಾಸಿಗೆಯನ್ನು ಭರ್ತಿ ಮಾಡದಂತೆ ಜಾಗರೂಕತರಾಗಿರಿ ಎಂದು ಎಚ್ಚರಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply