Connect with us

LATEST NEWS

ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ!

ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *