LATEST NEWS
ಉಡುಪಿ ಜಿಲ್ಲೆಯ ಕಾಂಗ್ರೇಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮನೆ ಮೇಲೆ ಐಟಿ ರೇಡ್

ಉಡುಪಿ ಜಿಲ್ಲೆಯ ಕಾಂಗ್ರೇಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮನೆ ಮೇಲೆ ಐಟಿ ರೇಡ್
ಉಡುಪಿ ಜನವರಿ 23 : ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಉಡುಪಿಯ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಕಂ ರಾಜಕಾರಣಿ ಮತ್ತು ಕ್ರಷರ್ ಮಾಲೀಕನ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ಏಕ ಕಾಲಕ್ಕೆ ದಾಳಿ ನಡೆಸಿದ್ದು, ಕಾರ್ಕಳದ ರಾಜಕಾರಣಿ ಮತ್ತು ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತು ಕ್ರಷರ್ ಮಾಲೀಕ ಜಾಯ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮುನಿಯಾಲಿನಲ್ಲಿರುವ ಉದಯ ಕುಮಾರ್ ಶೆಟ್ಟಿಯವರ ಮನೆ, ಗೇರು ಕಾರ್ಖಾನೆ, ಕೋಟದಲ್ಲಿರುವ ಫಿಶ್ಮಿಲ್ ಸಹಿತ ಕಚೇರಿ ಮತ್ತು ಮನೆಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಇತರೆ ಉದ್ಯಮಿಗಳ ಮನೆ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಜಿಲ್ಲೆಯ ಪ್ರಭಾವಿ ಉಧ್ಯಮಿಗಳ ನಿದ್ದೆಗೆಡಿಸಿದೆ.