LATEST NEWS
ಇಂದಿನಿಂದ ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ – ಸದ್ಯಕ್ಕೆ ತೀರ್ಥ ಪ್ರಸಾದ ಇಲ್ಲ…!!
ಉಡುಪಿ ಜುಲೈ 11: ಕೊರೊನಾ ಎರಡನೇ ಅಲೆ ಹಿನ್ನಲೆ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಂತರ ಇದೀಗ ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಧಾರ್ಮಿಕ ಕೇಂದ್ರಗಳಿಗೆ ಸರಕಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಈ ಹಿನ್ನಲೆ ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಭಕ್ತರಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಪರ್ಯಾಯ ಅದಮಾರು ಮಠ ಹೇಳಿದೆ.
ವಾರದ ಹಿಂದೆ ರಾಜ್ಯ ಸರ್ಕಾರ ದೇವಸ್ಥಾನಗಳನ್ನು ತೆರೆಯಲು ಅವಕಾಶ ಕಲ್ಪಿಸಿತ್ತು. ರಾಜ್ಯಾದ್ಯಂತ ಮಠ, ಮಂದಿರಗಳು ತೆರೆದರೂ, ಉಡುಪಿ ಶ್ರೀ ಕೃಷ್ಣ ಮಠ ತೆರೆದಿರಲಿಲ್ಲ. ಕೊರೊನಾ ಹತೋಟಿಗೆ ಬಂದ ನಂತರ ಮಠದಲ್ಲಿ ಅವಕಾಶ ಕಲ್ಪಿಸುವುದಾಗಿ ಹೇಳಿತ್ತು.
ಇದೀಗ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಇದೇ ಭಾನುವಾರದಿಂದ ಭಕ್ತರಿಗೆ ಮಠ ಪ್ರವೇಶಿಸಲು ಅವಕಾಶ ನೀಡಿದ್ದಾರೆ. ಮಧ್ಯಾಹ್ನದ ಪೂಜೆಯ ನಂತರ ಉಡುಪಿ ಶ್ರೀಕೃಷ್ಣನ ದರ್ಶನ ಮಾಡಬಹುದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಠದ ಒಳಗೆ ಬರುವ ಅವಕಾಶವನ್ನು ನೀಡಲಾಗಿದೆ.
ಉಡುಪಿ ಶ್ರೀಕೃಷ್ಣ ಮಠದ ಒಳಗೆ ಪ್ರವೇಶಿಸುವ ಸರತಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿ ಮಠದೊಳಗೆ ಬರಬೇಕು ಎಂದು ಮಠ ಹೇಳಿದೆ. ತೀರ್ಥ ಪ್ರಸಾದದ ಅವಕಾಶ ಇಲ್ಲ. ದೇವರ ದರ್ಶನಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದೆ.
You must be logged in to post a comment Login