UDUPI
ಉಡುಪಿ : ಮಲ್ಪೆ ಬೀಚ್ ಗೆ ಬಂದಿದ್ದ ಮಂಡ್ಯ ಪ್ರವಾಸಿ ಸಮುದ್ರದಲ್ಲಿ ಮುಳುಗಿ ಮೃತ್ಯು…!!
ಉಡುಪಿ : ಉಡುಪಿ ಯ ಮಲ್ಪೆ ಬೀಚ್ಗೆ ಮಂಡ್ಯದಿಂದ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದಿದ್ದರು. ಇವರೆಲ್ಲ ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರೆನ್ನಲಾಗಿದೆ. ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರು ದಾರಿಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
You must be logged in to post a comment Login