Connect with us

    LATEST NEWS

    ಕುಡಿದು ಕಾರು ಓಡಿಸಿದಲ್ಲದೇ..ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಎಂಬಿಬಿಎಸ್ ವಿಧ್ಯಾರ್ಥಿ

    ಉಡುಪಿ ಫೆಬ್ರವರಿ 20: ಕುಡಿದು ಗಾಡಿ ಓಡಿಸಿದಲ್ಲದೆ ಸಂಚಾರಿ ಪೊಲೀಸರ ಮೇಲೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ದರ್ಪ ತೋರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.


    ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ರಂಪಾಟ ಮಾಡ್ತಿರೋ ಯುವಕ ಮಣಿಪಾಲ ವಿವಿಯ ಎಂಬಿಬಿಎಸ್ ವಿದ್ಯಾರ್ಥಿ ಅನುರಾಗ ರೆಡ್ಡಿ. ಯದ್ವಾತದ್ವಾ ಕಾರ್ ರೈಡ್ ಮಾಡುತ್ತಾ ಬಂದ ಯುವಕನನ್ನು ಸಂಚಾರಿ ಪೊಲೀಸರು ಕಲ್ಸಂಕ ಜಂಕ್ಷನ್‌ನಲ್ಲಿ ತಡೆದಿದ್ದರು.
    ಈ ವೇಳೆ ಆತನಿಗೆ ಮದ್ಯ ಸೇವನೆ ಮಾಡಿರುವ ಬಗ್ಗೆ ಪರೀಕ್ಷೆ ಮಾಡಿದಾಗ ಆಲ್ಕೋಮೀಟರ್‌ನಲ್ಲಿ ಕುಡಿತದ ಪ್ರಮಾಣ 193 ತೋರಿಸಿತ್ತು. ಇದಕ್ಕಾಗಿ ಕಾನೂನಿನಂತೆ ದಂಡ ಹಾಕಿದಾಗ, ‘ತಾನು ಯಾವುದೇ ಕಾರಣಕ್ಕೂ 3000 ರೂ.ಗಳಿಗಿಂತ ಹೆಚ್ಚಿನ ದಂಡ ಕಟ್ಟುವುದಿಲ್ಲ.

    ನನ್ನ ಅಪ್ಪ ಆಂಧ್ರದ ಎಂಪಿ, ಆಂಧ್ರ ಸರಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ನನ್ನ ಅಪ್ಪ ಆಪ್ತಮಿತ್ರರು. ನಾನು ಅವರಿಗೆ ಕರೆ ಮಾಡುತ್ತೇನೆ. ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ರೈಟ್ ಹ್ಯಾಂಡ್.‌ ನೀವು ಅವರಲ್ಲಿಯೇ ಮಾತಾಡಿ’ ಎಂದು ದರ್ಪದ ಮಾತಾಡಿದ್ದಾನೆ.

    ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು, ಆರೋಪಿ ಅನುರಾಗ್ ರೆಡ್ಡಿಯ ಕಾರನ್ನು ಸೀಜ್ ಮಾಡಿದ್ದಾರೆ. ಅಲ್ಲದೇ ಆತನ ಮೇಲೆ ಮದ್ಯಪಾನ ಮಾಡಿ ವಾಹನ ಚಾಲನೆ, ಅತೀವೇಗದ ವಾಹನ ಚಾಲನೆ ಕೇಸ್ ಹಾಕಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply