Connect with us

    LATEST NEWS

    ಉಡುಪಿ – ಮದ್ಯದ ನಶೆಯಲ್ಲಿ ಗಲಾಟೆ ಕೊಲೆಯಲ್ಲಿ ಅಂತ್ಯ…!!

    ಉಡುಪಿ ಎಪ್ರಿಲ್ 21 : ಕುಡಿದುಕೊಂಡು ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.


    ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು ಬಾರ್ ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದು ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

    ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply