Connect with us

    LATEST NEWS

    ಅಜೆಕಾರು – ಪ್ರಿಯಕರನ ಜೊತೆ ಸೇರಿ ಗಂಡನ ಮುಗಿಸಿದ ಪತ್ನಿ…!!

    ಉಡುಪಿ ಅಕ್ಟೋಬರ್ 25: ತಮ್ಮ ಗೆಳೆತನಕ್ಕೆ ಅಡ್ಡಿ ಬರುತ್ತಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಹೆಂಡತಿ ಕೊಲೆ ಮಾಡಿದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.


    ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್ ಬಂಧಿತ ಆರೋಪಿಗಳು. ಕೊಲೆಯಾದ ಬಾಲಕೃಷ್ಣ ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ವೈದ್ಯರು ಪರೀಕ್ಷೆ ನಡೆಸಿದಾಗ ಅವರಿಗೆ ಜಾಂಡಿಸ್ ಇತ್ತು ಎಂದು ತಿಳಿದು ಬಂದಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು, ಮಣಿಪಾಲ, ಬೆಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗರಲಿಲ್ಲ. ಈ ಹಿನ್ನಲೆ ಅಕ್ಟೋಬರ್ 19 ರಂದು ಮನೆಗೆ ಕರೆತರಲಾಗಿತ್ತು, ಮರುದಿನ ಅಕ್ಟೋಬರ್ .20 ರಂದು ಬೆಳಗ್ಗಿನ ಜಾವ 3.30 ರ ಹೊತ್ತಿಗೆ ಬಾಲಕೃಷ್ಣ ಅವರು ಮೃತಪಟ್ಟಿದ್ದಾರೆ. ದಿಢೀರ್‌ ಕಾಣಿಸಿಕೊಂಡ ಅನಾರೋಗ್ಯದಿಂದ ಬಾಲಕೃಷ್ಣ ಅವರು ಮೃತಪಟಿದ್ದರಿಂದ ಪ್ರತಿಮಾಳ ಅಣ್ಣ ಪದೇ ಪದೇ ವಿಚಾರಿಸಿದಾಗ ಸತ್ಯ ಬಯಲಾಗಿದೆ.

    ಪ್ರತಿಮಾ ಮತ್ತು ದಿಲೀಪ್ ತಮ್ಮ ಗೆಳೆತನಕ್ಕೆ ಅಡ್ಡ ಬರುತ್ತಿದ್ದ ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಯೋಚಿಸಿದ್ದರು. ಯೋಜನೆಯಂತೆ ದಿಲೀಪನು ಯಾವುದೋ ವಿಷ ಪದಾರ್ಥ ತಂದು, ಅದನ್ನು ಊಟದಲ್ಲಿ ಬೆರೆಸಿ ಕೊಟ್ಟರೆ ನಿಧಾನವಾಗಿ ಸಾಯುತ್ತಾರೆ ಎಂದು ಹೇಳಿ ಕೊಟ್ಟಿದ್ದ. ಅದರಂತೆ ನಾನು ಅವರಿಗೆ ಊಟದಲ್ಲಿ ಹಾಕಿ ಕೊಟ್ಟಿದ್ದೇನೆ. ನಂತರ ಬಾಲಕೃಷ್ಣ ಅವರಿಗೆ ಅಸೌಖ್ಯ ಉಂಟಾಗಿದ್ದು, ನಾನು ಹೇಳಿದಂತೆ ಅ.20 ರಂದು ಬೆಳಗಿನ ಜಾವ 01:30 ಗಂಟೆಗೆ ದಿಲೀಪನು ನಮ್ಮ ಮನೆಗೆ ಬಂದಿದ್ದು, ನಾವಿಬ್ಬರು ಸೇರಿ ಬೆಡ್‌ಶೀಟ್‌ ಅನ್ನು ಬಾಲಕೃಷ್ಣರ ಮುಖಕ್ಕೆ ಒತ್ತಿ ಹಿಡಿದು ಅವರನ್ನು ಕೊಲೆ ಮಾಡಿರುತ್ತೇವೆ ಎಂದು ಪ್ರತಿಮಾ ಒಪ್ಪಿಕೊಂಡಿರುವುದಾಗಿ ಬಾಲಕೃಷ್ಣ ಅವರ ತಮ್ಮ ರಾಮಕೃಷ್ಣ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply