LATEST NEWS
ಉಡುಪಿ ನೇಜಾರು ಹತ್ಯ ಕಾಂಡ ಪ್ರಕರಣ : ಜೂನ್ 13 ರಿಂದ ಸಾಕ್ಷಿಗಳ ವಿಚಾರಣೆ ಆರಂಭ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.
ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಸಾಕ್ಷಿಗಳಿಗೆ ಸಮನ್ಸ್ ನೀಡಿ, ಮುಂದಿನ ವಿಚಾರಣೆಯು ಜೂನ್ 13ರಿಂದ 15ರ ಅವಧಿಯಲ್ಲಿ ನಡೆಯಲಿದೆ. ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನಗಳಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
You must be logged in to post a comment Login