Connect with us

LATEST NEWS

ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತ ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆ

ಉಡುಪಿ ಮಾರ್ಚ್ 20: ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತ ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.


ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನದಲ್ಲಿ ನಾಲ್ಕನೇ ಅಂಗವಾಗಿ ಮಾಧ್ಯಮ ಎಂದು ಪರಿಗಣಿಸಲಾಗಿದ್ದು, ಪತ್ರಕರ್ತರು ವೃತ್ತಿಗೆ ಬದ್ದವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಪ್ರಸ್ತುತ ನಿರ್ಮಾಣವಾಗಿರುವ ಭ್ರಷ್ಟ ರಾಜಕೀಯ ವ್ಯವಸ್ಥೆಗೆ ಸಮಾಜವೇ ಕಾರಣವಾಗಿದ್ದು, ಬದಲಾಗದಿದ್ದರೆ ವಿಪತ್ತು ಕಾದಿದೆ ಎಂದು ಎಚ್ಚರಿಕೆ ನೀಡಿದರು.

ಶ್ರೀಮಂತಿಕೆಯಿಂದ ಮಾತ್ರ ಅಧಿಕಾರ ಸಿಗುತ್ತದೆ ಎಂಬ ಸಮಾಜದಲ್ಲಿರುವ ಭಾವನೆಯನ್ನು ಮಾಧ್ಯಮಗಳು ಬದಲಿಸಬೇಕು ಎಂದು ಸಲಹೆ ನೀಡಿದರು. ಹಲವು ಹಗರಣ, ಭ್ರಷ್ಟಾಚಾರಗಳಿಂದ ದೇಶದ ತಿಜೋರಿ ಕೊಳ್ಳೆ ಮಾಡಲಾಗುತ್ತಿದ್ದು ದೇಶದ ಪ್ರಜೆಗಳು ಎಚ್ಚೆತ್ತುಕೊಂಡು ಜವಾಬ್ದಾರಿ ನಿಭಾಯಿಸಬೇಕು. ಅವ್ಯವಹಾರಗಳನ್ನು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *