Connect with us

    LATEST NEWS

    ಉಡುಪಿ – ಖಾಸಗಿ ಬಸ್ ಚಾಲಕರಿಬ್ಬರಿಗೆ ಚೂರಿ ಇರಿತ

    ಉಡುಪಿ ಜನವರಿ 20 : ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ ಕಾರಣಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.


    ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ರಾತ್ರಿ ಮೂವರಿದ್ದ ತಂಡವು ಈ ಕೃತ್ಯ ಎಸಗಿದ್ದು ಗಾಯಳು ಬಸ್ ಚಾಲಕರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply