LATEST NEWS
ಉಡುಪಿಯಲ್ಲಿ ಮಳೆ ಅಬ್ಬರ – ನಾಳೆ (ಜುಲೈ 9)ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ರಜೆ
ಉಡುಪಿ ಜುಲೈ 08 : ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.
You must be logged in to post a comment Login