Connect with us

LATEST NEWS

ಉಡುಪಿ – ಮಾಜಿ ಕರ್ನಲ್ ರಾಮಚಂದ್ರ ರಾವ್ ಇನ್ನಿಲ್ಲ…!!

ಉಡುಪಿ ಜೂನ್ 15: ಚೀನಾ-ಪಾಕ್ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ ಅವರು ಸೋಮವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.


ಮಾಜಿ ಕರ್ನಲ್ ರಾಮಚಂದ್ರ ರಾವ್ ಅವರು ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದು, ಚೀನಾ ಯುದ್ಧ, ಪಾಕಿಸ್ತಾನ ಯುದ್ಧ ಹಾಗೂ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 1960ರಲ್ಲಿ ಸೇನೆ ಸೇರಿದ ರಾಮಚಂದ್ರ ರಾವ್ 1963ರಲ್ಲಿ ಕ್ಯಾಪ್ಟನ್, ನಂತರ ಮೇಜರ್, ಲೆಫ್ಟಿನಿಂಟ್ ಕರ್ನಲ್, ಕರ್ನಲ್ ಹುದ್ದೆಗೇರಿದ್ದರು.

29 ವರ್ಷ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯ ಬಳಿಕ ಉಡುಪಿಯ ಬಡಾನಿಡಿಯೂರಿನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿಯಲ್ಲಿ ಕಾರ್ಯ, ಶ್ರೀಕೃಷ್ಣ ಬಾಲನಿಕೇತನ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ‘ನವೀನ್ ಪೇಜಾವರ ಟ್ರಸ್ಟ್’ ಮೂಲಕ ಬಡವರಿಗೆ ನೆರವು ನೀಡುತ್ತಿದ್ದರು. 2017ರಲ್ಲಿ ಯಕ್ಷಗಾನ ಕಲಾರಂಗ ಎಸ್.ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ ನೀಡಿ ಗೌರವಿಸಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *