LATEST NEWS
ಉಡುಪಿ – ಆರು ಅಂಗಡಿಗಳಲ್ಲಿ ಕಳ್ಳರ ಕೈಚಳಕ
ಉಡುಪಿ ನವೆಂಬರ್ 1: ಆರು ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್, ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್ನಲ್ಲಿ ಎರಡು ಅಂಗಡಿಗಳ ಬೀಗ ಮುರಿದು ಕಳ್ಳರು ಅಂಗಡಿಯೊಳಗೆ ಇದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಉಡುಪಿ ಮತ್ತು ಮಣಿಪಾಲ ಠಾಣೆಯ ಪೊಲೀಸರು ಕಳ್ಳತನ ನಡೆದ ಅಂಗಡಿಗಳಿಗೆ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಣಿಪಾಲ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
You must be logged in to post a comment Login