Connect with us

    LATEST NEWS

    ಉಡುಪಿ – ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ನಿಧನ

    ಉಡುಪಿ ಜನವರಿ 04:ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


    ಶಾರದಾ ಇಂಟರ್‌ನ್ಯಾಷನಲ್ ಹೋಟೆಲ್ ಮಾಲೀಕರಾಗಿದ್ದ ಸುಧಾಕರ ಶೆಟ್ಟಿ ಹೋಟೆಲ್ ಉದ್ಯಮದ ಜತೆಗೆ ರಾಜಕೀಯವಾಗಿಯೂ ಬೆಳೆದಿದ್ದರು. 2009ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 1999, 2004 ಹಾಗೂ 2013ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.

    ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply