Connect with us

LATEST NEWS

ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ – ಉಡುಪಿ ಎಸ್ಪಿ

ಉಡುಪಿ ಸೆಪ್ಟೆಂಬರ್ 17:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ.


ಮಕ್ಕಳ ಕಳ್ಳರು ಇದ್ದಾರೆ ಎಂದು ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *