LATEST NEWS
ಕಲಿತ ಶಾಲೆ ಮುಚ್ಚಬಾರದೆಂದು ಪ್ರಧಾನಿಗೆ ಪತ್ರ ಬರೆದ ಬಾಲಕಿ…!
ಉಡುಪಿ, ಅಕ್ಟೋಬರ್ 12: ತಾನು ಕಲಿತ ಪ್ರೌಢಶಾಲೆಯನ್ನು ಮುಚ್ಚಬಾರದು ಎಂದು ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಸ್ವತ: ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಿದೆ. ಇದೇ ಕಾರಣಕ್ಕೆ ಮತ್ತೊಂದು ಶಾಲೆಯೊಂದಿಗೆ ಈ ಶಾಲೆಯನ್ನು ವಿಲೀನಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಶಾಲೆಯ ಶಿಕ್ಷಕರನ್ನು ಬೇರೆ ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ನಡುವೆ ಗ್ರಾಮಸ್ಥರು ಈ ಪ್ರಕ್ರಿಯೆಯನ್ನು ವಿರೋಧಿಸಿದ ಕಾರಣ ಅವರ ಮನವಿಯ ಮೇರೆಗೆ ಶಿಕ್ಷಣ ಇಲಾಖೆ ಒಂದು ಕಲಿಕೆಗೆ ಅನುಮತಿಯನ್ನೇನೂ ನೀಡಿತ್ತು. ಈ ಮಧ್ಯ ಶಾಲೆಯ ವಿದ್ಯಾರ್ಥಿನಿ ವರ್ಷಿತ ಆರ್ ಎಂಬ ಬಾಲಕಿ ಪ್ರಧಾನಿ ಕಾರ್ಯಾಲಯಕ್ಕೆ ಒಂದು ಪತ್ರ ಬರೆದಿದ್ದಳು.
ಪಂಚನಬೆಟ್ಟು ಶಾಲೆಯನ್ನು ಉಳಿಸಿ ಕೊಡಬೇಕೆಂದು ಮನವಿ ಮಾಡಿದ್ದಳು. ಈ ಪರಿಸರದ ಸುಮಾರು ಹದಿನೈದು ಕಿಲೋಮೀಟರ್ ವ್ಯಾಪ್ತಿಯ ಮಕ್ಕಳಿಗೆ ಈ ಶಾಲೆಯಿಂದ ಅನುಕೂಲವಾಗುತ್ತದೆ. ಶಾಲೆ ಮುಚ್ಚಿದರೆ ಎಂಟು ಕಿಲೋಮೀಟರ್ ದೂರದ ಬೈಲೂರಿಗೆ ಹೋಗಬೇಕಾಗುತ್ತದೆ.
ಗ್ರಾಮಾಂತರ ಪ್ರದೇಶದ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿ ಎಂದು ಕೋರಿಕೊಂಡಿದ್ದಳು. ಮನವಿಗೆ ಸ್ಪಂದಿಸಿರುವ ಪ್ರಧಾನಿ ಕಾರ್ಯಾಲಯ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಶಾಲೆ ಉಳಿಸಿಕೊಳ್ಳುವ ಬಗ್ಗೆ ಪರಾಮರ್ಶಿಸಿ ಉತ್ತರಿಸುವಂತೆ ಸೂಚನೆ ನೀಡಿದೆ. ನಾನು ಕಳೆದ ವರ್ಷವಷ್ಟೇ ಎಸೆಸೆಲ್ಸಿ ಮುಗಿಸಿದ್ದು ನನ್ನ ತಂಗಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಊರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕೆ ಈ ಶಾಲೆ ಉಳಿಯಬೇಕು ಎಂದು ವರ್ಷಿತಾ ತಿಳಿಸಿದ್ದಾರೆ.
Video:
Facebook Comments
You may like
-
ಉಡುಪಿ ಗಣರಾಜ್ಯೋತ್ಸವ ಸಂಭ್ರಮಕ್ಕೆ ಮೂರು ವರ್ಷದ ಬಾಲೆಯಿಂದ ಮಿಷನ್ ಗನ್ ಭದ್ರತೆ
-
ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ – ಸಚಿವ ಅಂಗಾರ
-
ಗೋಮಾಳದ ಭೂಮಿಯನ್ನು ಗೋಶಾಲೆಗಳಿಗೆ ನೀಡಲು ಕಂದಾಯ ಮಂತ್ರಿ ಅಸ್ತು
-
ದೊಡ್ಡಣಗುಡ್ಡೆ ರಹ್ಮಾನಿಯಾ ಮಸೀದಿಯಲ್ಲಿ ಉರೂಸ್ ಸಡಗರ
-
ಕೋಳಿ ಕಳ್ಳರಿದ್ದಾರೆ ಎಚ್ಚರಿಕೆ!!! ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ?
-
ಲಾರಿ ಚಾಲಕನ ಅವಾಂತರ-ಜನಸಾಮಾನ್ಯ ಪ್ರಾಣ ಉಳಿಸಿದ ಕಾಪು ಎಸೈ ರಾಘವೇಂದ್ರ
You must be logged in to post a comment Login