Connect with us

    LATEST NEWS

    ಉಡುಪಿ – ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆಗೆ ಶರಣು…!!

    ಉಡುಪಿ ಮೇ 22: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನವಜೋಡಿಯೊಂದು ಕಾರಿನೊಳಗಡೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.


    ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು. ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್‌ ಮತ್ತು ಜ್ಯೋತಿ ಎಂದು ಗುರುತಿಸಲಾಗಿದ್ದು, ಇಬ್ಬರು ಸಜೀವದಹನಗೊಂಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಇವರ ಮೇಲೆ ಬೆಂಗಳೂರಿನಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಶನಿವಾರ ಮಂಗಳೂರಿನಿಂದ ಹುಸೇನ್‌ ಎಂಬವರ ಸ್ವಿಫ್ಟ್‌ ಕಾರನ್ನು ಬಾಡಿಗೆ ಪಡೆದು ಇವರಿಬ್ಬರು ವಿವಿಧ ಸ್ಥಳಗಳಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ.


    ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇವರಿಬ್ಬರು ಸಂಬಂಧಿಕರೇ ಅಥವಾ ಸ್ನೇಹಿತರೇ ಎಂಬುದು ತಿಳಿದು ಬಂದಿಲ್ಲ. ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

    Share Information
    Advertisement
    Click to comment

    You must be logged in to post a comment Login

    Leave a Reply