Connect with us

    LATEST NEWS

    ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿದ ಕಂದಕಕ್ಕೆ ಬಿದ್ದ ಕಾರು

    ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.

    5 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದ್ದು. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.

    ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Video:

    Share Information
    Advertisement
    Click to comment

    You must be logged in to post a comment Login

    Leave a Reply