Connect with us

    LATEST NEWS

    ಉಳ್ಳಾಲ – ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ

    ಉಳ್ಳಾಲ ಅಕ್ಟೋಬರ್ 05: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ.


    ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.‌ ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply