Connect with us

    LATEST NEWS

    ಅಂತರ್ ರಾಜ್ಯ ದ್ವಿಚಕ್ರವಾಹನ ಕಳ್ಳರ ಬಂಧನ

    ಅಂತರ್ ರಾಜ್ಯ ದ್ವಿಚಕ್ರವಾಹನ ಕಳ್ಳರ ಬಂಧನ

    ಮಂಗಳೂರು ನವೆಂಬರ್ 14: ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂತರಾಜ್ಯ ಮೋಟಾರ್ ವಾಹನ ಕಳ್ಳತನದ 15 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 3 ಜನ ಆರೋಪಿಗಳನ್ನು ಬಂಧಿಸಿ 20 ಲಕ್ಷ ರೂಪಾಯಿ ಮೌಲ್ಯದ 15 ದ್ವಿ ಚಕ್ರ ವಾಹನಗಳನ್ನು ಸ್ವಾದೀನಪಡಿಸಿಕೊಂಡಿದ್ದಾರೆ.

    ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಾಹಿರ್, ಮೊಹಮ್ಮದ್ ಆದೀಲ್, ಅಬ್ದುಲ್ ಮುನಾವರ್ ಎಂದು ಗುರುತಿಸಲಾಗಿದೆ.
    ಆರೋಪಿಗಳನ್ನು ತನಿಖೆಗೆ ಒಳಪಡಿಸಿದಾಗ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬುಲೆಟ್ ಸೇರಿದಂತೆ ಒಟ್ಟು 15 ದ್ವಿಚಕ್ರ ವಾಹನಗಳನ್ನು ಕಳ್ಳತನ ನಡೆಸಿರುವುದು ಪತ್ತೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply