Connect with us

DAKSHINA KANNADA

ಉಳ್ಳಾಲ : ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ದುರಂತ, ಸ್ಪೀಕರ್‌ ಯು.ಟಿ. ಖಾದರ್‌ ತೀವ್ರ ಸಂತಾಪ..

ಉಳ್ಳಾಲ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್‌ ಪೂಲ್ ನಲ್ಲಿ ಭಾನುವಾರ ಬೆಳಗ್ಗೆ ಮುಳುಗಿ ಮೂವರು ಯುವತಿಯರು ಮೃತಪಟ್ಟಿರುವುದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಳ್ಳಾಲ : ಉಳ್ಳಾಲ ಸೋಮೇಶ್ವರ ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್‌ ಪೂಲ್ ನಲ್ಲಿ ಭಾನುವಾರ ಬೆಳಗ್ಗೆ ಮುಳುಗಿ ಮೂವರು ಯುವತಿಯರು ಮೃತಪಟ್ಟಿರುವುದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಜಯ ನಗರದ ದೇವರಾಜ್ ಮೊಹಲ್ಲಾ ನಿವಾಸಿ ನವೀನ್ ಕುಮಾರ್ ಎಂಬವರ ಪುತ್ರಿ ಕೀರ್ತನಾ ಎನ್‌. (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಎಂಬವರ ಪುತ್ರಿ ನಿಶಿತಾ ಎಂ.ಡಿ.(21) ಹಾಗೂ ಮೈಸೂರು ಕೆ.ಆ‌ರ್.ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್‌ ನಿವಾಸಿ ಎಂ.ಎನ್.ಶ್ರೀನಿವಾಸ್ ಎಂಬವರ ಪುತ್ರಿ ಪಾರ್ವತಿ ಎಸ್‌.(20)  ಮೂವರು ಯುವತಿಯರು ದಾರುಣ ಅಂತ್ಯ ಕಂಡಿದ್ದಾರೆ. ಈ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.  ಈ   ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬ ವರ್ಗದವರಿಗೆ ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸ್ಪೀಕರ್‌ ಯು.ಟಿ. ಖಾದರ್‌ ಅವರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *