Connect with us

    LATEST NEWS

    ಉಳ್ಳಾಲ- ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೂಡ್ಸ್ ಆಟೋ ಚಾಲಕ

    ಮಂಗಳೂರು ಸೆಪ್ಟೆಂಬರ್ 27: ಗೂಡ್ಸ್ ರಿಕ್ಷಾ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಕೃಷ್ಣ ನಗರದ ಲಚ್ಚಿಲ್ ನಿವಾಸಿ ನಾಗೇಶ್ (62) ಎಂದು ಗುರುತಿಸಲಾಗಿದೆ.


    ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು.ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.ಗಣೇಶ್ ಭವನ ಮಾಲಕರ ಮನೆಯಂಗಳದಲ್ಲೇ ನಿಲ್ಲಿಸಲಾಗಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್,ನಗದು ,ಫೋಟೊ,ಚಪ್ಪಲಿ ದೊರಕಿದ್ದು ಅನುಮಾನ ಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.

    ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬಾವಿಯಲ್ಲಿ ನಾಗೇಶ್ ದೇಹವಿರುವುದು ಖಾತ್ರಿಯಾಗಿದ್ದು ಮೃತ ದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply