Connect with us

    LATEST NEWS

    ಉಳ್ಳಾಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಗಲ್ಫ್ ಉದ್ಯೋಗಿ ಮೃತ್ಯು..!

    ಉಳ್ಳಾಲ: ಕಾರು ಢಿಕ್ಕಿ ಹೊಡೆದು  ರಸ್ತೆ ದಾಟುತ್ತಿದ್ದ ವ್ಯಕ್ತಿ  ಸಾವನ್ನಪ್ಪಿರುವ ಘಟನೆ ಉಳ್ಳಾಲದ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48 ವ) ಮೃತಪಟ್ಟ ದುರ್ದೈವಿ. ಗಲ್ಫ್ ರಾಷ್ಟ್ರದಲ್ಲಿ ಸಿದ್ದಖ್ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲ್ಯಾಟ್ ನಲ್ಲಿ ನೆಲೆಸಿರುವ ಸಿದ್ದಿಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿ  ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್ ನಲ್ಲಿ ಇಳಿದು, ಎಟಿಎಂ ಹಣ ಡ್ರಾ ಮಾಡಿದ್ದಾರೆ. ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.  ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದಿಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.  ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಡಿಪು ಭಾಗದಲ್ಲಿ ಫುಟ್‍ಪಾತನ್ನು ಅಂಗಡಿ ಮಾಲೀಕರು ಅಕ್ರಮಿಸಿದ್ದು, ಹೀಗಾಗಿ ಪಾದಚಾರಿಗಳು ರಸ್ತೆ ಮಧ್ಯೆ ನಡೆದುಕೊಂಡು ಹೋಗುವಂತಹ ಸ್ಥಿತಿಯಿದ್ದು, ಇದರಿಂದಾಗಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply