Connect with us

DAKSHINA KANNADA

ಉಳ್ಳಾಲ : ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಹರಿದ ಟೆಂಪೊ, ಸ್ಥಳದಲ್ಲೇ ಪ್ರಾಣ ಬಿಟ್ಟ ಪರಂಗಿಪೇಟೆ ಆದಂ..!!

ಉಳ್ಳಾಲ: ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ ಮೇಲೆ ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು ಆಡಂಕುದ್ರು ನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ.

ಬಂಟ್ವಾಳ ಪರಂಗಿಪೇಟೆಯ ಆದಂ (64) ಮೃತಪಟ್ಟದುರ್ದೈವಿಯಾಗಿದ್ದಾರೆ. ಮಾರ್ಗದ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್‌ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ನಿಯಂತ್ರಣ ತಪ್ಪಿದ ಟಾಟಾ 407 ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಅಂಗಡಿಯೊಂದರ ನಾಮಫಲಕಗಳಿಗೆ ಗುದ್ದಿ ಕಂದಕಕ್ಕೆ ಉರುಳಿದೆ.

ಮಂಗಳೂರಿನಿಂದ ಹೊರಟಿದ್ದ ಸರ್ಕಾರಿ ಬಸ್ ಆಡಂಕುದ್ರು ಬಳಿ ಕೆಟ್ಟು ನಿಂತಿತ್ತು. ಈ ಸಂದರ್ಭ ಆ ಬಸ್‌ನಲ್ಲಿದ್ದ ಆದಂ ಆ ಬಸ್ ನಿಂದ ಇಳಿದು ರಸ್ತೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಮಕ್ಕಳು ಕುಳಿತಿದ್ದು, ಕಾರು ಚಾಲಕ ಅಂಗಡಿಗೆ ತೆರಳಿದ್ದರು. ಮಕ್ಕಳು ಅಪಾಯವಿಲ್ಲದೇ ಪಾರಾಗಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *