Connect with us

    LATEST NEWS

    ಉಳ್ಳಾಲ : ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯಕ್ಕೆ ಸಂಚು,ಮಧ್ಯ ರಾತ್ರಿಯ ಭಯಾನಕ ಶಬ್ಬಕ್ಕೆ ಬೆಚ್ಚಿಬಿದ್ದ ಜನ..!  

    ಉಳ್ಳಾಲ: ರೈಲು ಹಳಿಯಲ್ಲಿ ಜಲ್ಲಿಕಲ್ಲುಗಳನ್ನು ವಿದ್ವಾಂಸಕ ಕೃತ್ಯ ನಡೆಸಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸಮೀಪದ ಗಣೇಶ್ ನಗರ, ಕಾಪಿಕಾಡ್ ನಡುವೆ ಶನಿವಾರ ರಾತ್ರಿ ನಡೆದಿದೆ.

    ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯ ಮನೆಗಳಲ್ಲಿ ಕಂಪನ ಅನುಭವ ಉಂಟಾಗಿದ್ದು, ಜನರು ಬೆಚ್ಚಿಬಿದ್ದು ಭಯಭೀತರಾಗಿ  ಹಳಿ ಸಮೀಪ ಬಂದು ನೋಡಿದಾಗ ದುಷ್ಕೃತ್ಯ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಎರಡೂ ಹಳಿಗಳಲ್ಲಿ ಜಲ್ಲಿಕಲ್ಲನ್ನು ಸಾಲಾಗಿ ಜೋಡಿಸಿಟ್ಟಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ವೇಳೆ ಇಬ್ಬರು ಹಳಿ ಮೇಳೆ ಸಂಚರಿಸುವುದನ್ನು ಸ್ಥಳಿಯರು ಕಂಡಿದ್ದು ಅವರೇ ಈ ಕೃತ್ಯ ಎಸಗಿರುವ ಶಂಕೆ ಇರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ರಾತ್ರಿ ವೇಳೆ ಸಿಸಿಟಿವಿ ಪರಿಶೀಲನೆ ಮಾಡಲಿಲ್ಲ. ಇದೀಗ ಇಂಜಿನಿಯರ್, ಅಧಿಕಾರಿಗಳು ಎಲ್ಲಾ ಜತೆಯಾಗಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ ಎಂದು ರೈಲ್ವೇ ಪೊಲೀಸರು ಹೇಳಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply