Connect with us

    BANTWAL

    ಕಲ್ಲಡ್ಕದಲ್ಲಿ ದುಷ್ಕರ್ಮಿಗಳಿಂದ ಯುವಕ ಮೇಲೆ ಮಾರಣಾಂತಿಕ ಹಲ್ಲೆ

    ಕಲ್ಲಡ್ಕದಲ್ಲಿ ದುಷ್ಕರ್ಮಿಗಳಿಂದ ಯುವಕ ಮೇಲೆ ಮಾರಣಾಂತಿಕ ಹಲ್ಲೆ

    ಬಂಟ್ವಾಳ ಜೂನ್ 12: ದುಷ್ಕರ್ಮಿಗಳ ತಂಡದಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಮೆಲ್ಕಾರ್ ನ ನಿವಾಸಿ ಚೇತನ್ ಮೆಲ್ಕಾರ್ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಮೂರು ಬೈಕ್ ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಚೇತನ್ ಕಲ್ಲಡ್ಕದ ಕೆಳಗಿನ ಪೇಟೆಯ ಫ್ಯಾನ್ಸಿ ಶಾಪ್ ಒಂದಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದಾರೆ.
    ದಾಳಿಯಿಂದ ತಪ್ಪಿಸಿಕೊಳ್ಳಲು ಚೇತನ್ ಪ್ರಯತ್ನ ಪಟ್ಟಿದ್ದು, ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಫ್ಯಾನ್ಸಿ ಶಾಪ್ ಒಳಗೆ ನುಗ್ಗಿದ್ದರಿಂದ ಪ್ರಾಣಾಪಾಯದಿಂದ ಚೇತನ್ ತಪ್ಪಿಸಿಕೊಂಡಿದ್ದಾನೆ.

    ದುಷ್ಕರ್ಮಿಗಳ ದಾಳಿಯಿಂದ ಚೇತನ್ ಗಂಭೀರವಾಗಿ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು , ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply