DAKSHINA KANNADA
ಉಪ್ಪಿನಂಗಡಿ – ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ – ಚಾಲಕ ಸಾವು
ಉಪ್ಪಿನಂಗಡಿ ಅಕ್ಟೋಬರ್ 12 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬಸ್ ಚಾಲಕರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ.
You must be logged in to post a comment Login