Connect with us

    DAKSHINA KANNADA

    ಉಪ್ಪಿನಂಗಡಿ ಮುಗಿಯದ ಹಿಜಬ್ ವಿವಾದ – ತರಗತಿ ಬಹಿಷ್ಕರಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

    ಉಪ್ಪಿನಂಗಡಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ.


    ಗುರುವಾರ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಜಾಬ್‌ಗೆ ಅವಕಾಶ ಕೊಡಬೇಡಿ ಎಂದು ಪಟ್ಟು ಹಿಡಿದ ಇತರ ವಿದ್ಯಾರ್ಥಿಗಳು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್‌ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾರೆ.

    ಇನ್ನು ಗುರುವಾರ ಸುದ್ದಿ ಮಾಡಲು ಹೋದ ಮಾಧ್ಯಮದವರ ಮೇಲೆ ಒಂದು ಗುಂಪು ಹಲ್ಲೆ ಮಾಡಿತ್ತು. ಈ ವೇಳೆ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು. ಈ ಸಂಬಂಧ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply