Connect with us

    DAKSHINA KANNADA

    ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

    ಉಪ್ಪಿನಂಗಡಿ, ಜುಲೈ 06 : ಉಪ್ಪಿನಂಗಡಿ ಸಮೀಪದ ಇಳಂತಿಲ ಬಳಿ ಸ್ನಾನ ಮಾಡಲು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ನೀರುಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ.

    ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ ಎಂಬವರ ಪುತ್ರರಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು.

    ಸೋಮವಾರ ಸಂಜೆ ಹೆತ್ತವರು ಕಾರ್ಯ ನಿಮಿತ್ತ ಪೇಟೆಗೆ ಹೋಗಿದ್ದ ಸಂದರ್ಭ ನದಿಯ ಆಳ ಅರಿಯದೆ ಸ್ನಾನಕ್ಕೆಂದು ಇವರು ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ದೂರಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply