Connect with us

DAKSHINA KANNADA

ಕೂರತ್ ತಂಬಳ್ ಉರೂಸ್ ಗೆ ನಿರೀಕ್ಷೆಗೂ ಮೀರಿ ಬಂದ ಜನ -ದಟ್ಟಣೆಯಲ್ಲಿ ನಿತ್ರಾಣಗೊಂಡ 6 ಮಂದಿಗೆ ಚಿಕಿತ್ಸೆ

ಪುತ್ತೂರು ಜೂನ್ 29: ಕುದ್ಮಾರು ಕೂರತ್ ಫಝಲ್ ನಗರದಲ್ಲಿ ನಡೆಯುತ್ತಿರುವ ಕೂರತ್ ತಂಬಳ್ ಉರೂಸ್ ಕಾರ್ಯಕ್ರಮಕ್ಕೆ ನಿರೀಕ್ಷೆ ಗೂ ಮೀರಿ ಜನ ಆಗಮಿಸಿದ ಹಿನ್ನಲೆ 6 ಮಂದಿ ನಿತ್ರಾಣಗೊಂಡು ಅಸ್ವಸ್ಥಗೊಂಡ ಘಟನೆ ನಡೆದಿದೆ.


ಜೂನ್ 26ರಿಂದ 29ರವರೆಗೆ ಆಯೋಜಿಸಲಾಗಿದ್ದ ಉರೂಸ್‌ನ ಅಂತಿಮ ದಿನದ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಭಾಗಗಳಿಂದ ನಿರೀಕ್ಷೆಗೂ ಮೀರಿ ಜನ ಬಂದಿದ್ದರು. ಕಿಕ್ಕಿರಿದು ತುಂಬಿದ್ದ ಜನಸಂದಣಿಯಲ್ಲಿ 6 ಮಂದಿಗೆ ದೈಹಿಕ ನಿತ್ರಾಣ ವುಂಟಾಗಿದ್ದು, ಅವರಿಗೆ ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಚರಿಸಲಾಗಿ ಇಬ್ಬರ ಆರೋಗ್ಯ ಸ್ಥಳದಲ್ಲೇ ಸುಧಾರಿಸಿರುತ್ತದೆ. ಉಳಿದ 04 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿರುತ್ತಾರೆ. ಸದ್ರಿ ಉರುಸ್ ಕಾರ್ಯಕ್ರಮ ಮುಕ್ತಾಯಗೊಂಡಿರುತ್ತದೆ.

ಈ ಕುರಿತಂತೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳು ಹರಡದಂತೆ ಹಾಗೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದಾಗಿ ವಿನಂತಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *