LATEST NEWS
ಐವನ್ ಡಿಸೋಜಾ ಕೊರೊನಾ; ಕ್ವಾರಂಟೈನ್ ಗೆ ಒಳಗಾದ ಶಾಸಕ ಯು.ಟಿ ಖಾದರ್

ಮಂಗಳೂರ ಅಗಸ್ಟ್2 : ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿರುವ ಹಿನ್ನಲೆ ಮಾಜಿ ಸಚಿವ ಶಾಸಕ ಯು. ಟಿ ಖಾದರ್ ಕೆಲ ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜುಲೈ 31 ರಂದು ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭ ಪ್ರವಾಸದುದ್ದಕ್ಕೂ ಐವನ್ ಡಿಸೋಜಾ ಜೊತೆಯಲ್ಲೆ ಇದ್ದರು. ಡಿಕೆಶಿ ಜೊತೆ ಮಾಜಿ ಸಚಿವರಾದ ಯು.ಟಿ ಖಾದರ್, ರಮಾನಾಥ ರೈ, ಅಭಯ್ ಚಂದ್ರ ಜೈನ್ , ಜಿಲ್ಲಾ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಜಿಲ್ಲೆಯ ಬಹುತೇಕ ಕಾಂಗ್ರೇಸ್ ಮುಖಂಡರ ಗುಂಪು ಸೇರಿತ್ತು. ಈ ಹಿನ್ನಲೆ ಐವನ್ ಡಿಸೋಜಾ ಅವರಿಗೆ ಕೊರೊನಾ ಸೊಂಕು ತಗುಲಿರುವುದರಿಂದ ಈಗ ಡಿಕೆಶಿ ಸೇರಿದಂತೆ ಎಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಾದ ಅನಿವಾರ್ಯತೆ ಸಿಲುಕಿದ್ದಾರೆ.

ಈಗಾಗಲೇ ಶಾಸಕ ಯು.ಟಿ ಖಾದರ್ ತಾವು ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಪೋಸ್ಟ್ ಮಾಡಿರುವ ಖಾದರ್ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ.ಇವರೆಲ್ಲರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲವು ದಿನಗಳ ಕಾಲ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ.ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ , ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ.

ADVERTISEMENT
ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ. ಇದೇ ವೇಳೆ ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ. ಎಂದು ತಿಳಿಸಿದ್ದಾರೆ.
ಸದ್ಯ ಐವನ್ ಡಿಸೋಜಾ ಹಾಗೂ ಅವರ ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.