DAKSHINA KANNADA
ಯುಟಿ ಖಾದರ್ ಕಾರು ಬೆಂಬತ್ತಿ ಬಂದ ಬೈಕ್…!?
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ.
ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ ಖಾದರ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಯುಟಿ ಖಾದರ್ ಅವರ ಕಾರನ್ನು ದೇರಳಕಟ್ಟೆಯಿಂದ ಬೈಕ್ ನಲ್ಲಿ ಓರ್ವ ಹಿಂಬಾಲಿಸಿಕೊಂಡು ಬರುತ್ತಿರುವುದನ್ನು ಎಸ್ಕಾರ್ಟ್ ನೀಡುತ್ತಿದ್ದ ಪೊಲೀಸರು ಗಮನಿಸಿದ್ದಾರೆ. ಅವರು ಕೂಡಲೇ ಹಿರಿಯ ಪೊಲೀಸರಿಗೆ ಪೋನ್ ಮಾಡಿ ಮಾಹಿತಿ ನೀಡಿದ್ದಾರೆ.
ನಂತೂರು ಸರ್ಕಲ್ ಸಮೀಪ ವಾಹನ ದಟ್ಟಣೆಯಿಂದ ವಾಹನ ನಿಧಾನವಾಗಿ ಸಂಚರಿಸುತ್ತಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಆದರೆ, ಆ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ವ್ಯಕ್ತಿ ವಿರುದ್ಧ ದಿಕ್ಕಿನಲ್ಲಿ ತೆರಳಿ ಪರಾರಿಯಾಗಿದ್ದಾರೆ. ಅನುಮಾನಸ್ಪದವಾಗಿ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
You must be logged in to post a comment Login