Connect with us

FILM

ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು.ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು

ಬೆಂಗಳೂರು ನವೆಂಬರ್ 25: ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಕಿರುತೆರೆಯ ನಟಿ ವೈಷ್ಣವಿ ಗೌಡ ನಿಶ್ಟಿತಾರ್ಥ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿಶ್ಟಿತಾರ್ಥದ ಪೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೈಷ್ಣವಿ ನಿಶ್ಟಿತಾರ್ಥ ಮಾಡಿಕೊಂಡಿದ್ದ ಹುಡುಗನ ಕುರಿತ ಆಡಿಯೋ ಒಂದು ವೈರಲ್ ಆಗಿದೆ.


ನಿಶ್ಚಿತಾರ್ಥದ ಫೋಟೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಒಂದು ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಹುಡುಗಿ ಒಬ್ಬರು ವಿದ್ಯಾಭರಣ್​ ವಿರುದ್ಧ ಆರೋಪ ಮಾಡಿದ್ದರು. ಈ ಆಡಿಯೋ ಕುರಿತು ವಿದ್ಯಾಭರಣ್ ಸ್ಪಷ್ಟನೆ ನೀಡಿದ್ದಾರೆ. ‘ಈ ಹಿಂದೆ ನನಗೆ ಗರ್ಲ್​​ಫ್ರೆಂಡ್ ಇದ್ದಿದ್ದು ನಿಜ. ಇದ್ದು ಗೊತ್ತಿರುವ ವಿಚಾರ. ನಾನು ಯಾವುದೇ ಹುಡುಗಿಯೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಡಿಯೋದಲ್ಲಿ ನನ್ನ ಬಗ್ಗೆ ಯುವತಿಯೊಬ್ಬರು ಮಾತನಾಡಿದ್ದಾರೆ. ಆಕೆ ನೇರವಾಗಿಯೇ ಬಂದು ಆರೋಪ ಮಾಡಬಹುದಿತ್ತು. ಆರೋಪ ಮಾಡುವ ಬದಲು ನನ್ನ ವಿರುದ್ಧ ದೂರು ಕೊಡಬಹುದಿತ್ತು. ನಮ್ಮ ಕುಟುಂಬದ ವರ್ಚಸ್ಸು ಹಾಳು ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಇಂದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ’ ಎಂದು ವಿದ್ಯಾಭರಣ್ ಹೇಳಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ವೈಷ್ಣವಿ ‘ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ ನಡೆದಿಲ್ಲ ಅಂತ ನಾನು ಮುಂಚಿನಿಂದಲೂ ಹೇಳ್ತಾ ಬಂದಿದೀನಿ. ಇದನ್ನು ಇಲ್ಲಿಗೇ ಬಿಟ್ಟುಬಿಡಿ. ನಾನು ಈ ಕುರಿತು ಮತ್ತೆ ಮಾತನಾಡಿದ್ರೆ ಬೆಳೆಯುತ್ತಲೇ ಹೋಗುತ್ತದೆ. ಹುಡುಗನ ಕಡೆಯಿಂದ ಇನ್ನೇನೋ ಮಾತು ಬರಬಹುದು. ಅವರು ಹೆಣ್ಣು ನೋಡೋ ಶಾಸ್ತ್ರಕ್ಕೆಂದು ಬಂದು ತಾಂಬೂಲ ಬದಲಾಯಿಸಿಕೊಂಡ್ರು ಅಷ್ಟೇ. ಅದು ನಿಶ್ಚಿತಾರ್ಥ ಅಲ್ಲ’ ಎಂದು ಮಾತನಾಡಿದ್ದಾರೆ. ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು.ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು ಅಲ್ವೇ?’ ಎಂದಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply