Connect with us

LATEST NEWS

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಮತಯಾಚನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮತಯಾಚನೆ

ಮಂಗಳೂರು ಎಪ್ರಿಲ್ 24: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಇಂದು ಮುಂಜಾನೆ ಮಂಗಳೂರಿನ ಚಿಲಿಂಬಿಗುಡ್ಡಕ್ಕೆ ಭೇಟಿ ನೀಡಿ ಶ್ರೀ ರಾಮಾಂಜನೇಯ ಯುವಕ ಮಂಡಲದ ಸದಸ್ಯರೊಂದಿಗೆ ಸ್ಥಳೀಯ ದೈವ ದೇವರುಗಳ ಸನ್ನಿಧಾನಕ್ಕೆ ಭೇಟಿ ನೀಡಿ ಪಕ್ಷದ ಗೆಲುವು ಹಾಗೂ ಮಂಗಳೂರಿನ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ನಂತರ ಪರಿಸರದ ಮನೆಗಳಿಗೆ ತೆರಳಿ ಮತ ಯಾಚಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಜನಪರ ನಿಲುವು, ಯೋಜನೆಗಳನ್ನು ವಿವರಿಸಿ ಕರ್ನಾಟಕದಿಂದ ಮೋದಿ ಸರ್ಕಾರಕ್ಕೆ ಅಭೂತಪೂರ್ವ ಬೆಂಬಲ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *