Connect with us

LATEST NEWS

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಜಿಲ್ಲೆಯಾಗಿ ಮರು ನಾಮಕರಣಕ್ಕೆ ಶಾಸಕ ಕಾಮತ್ ಬೆಂಬಲ

ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.


ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ.

ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದರು. ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರುನಾಮಕರಣಕ್ಕೆ ಯಾವೆಲ್ಲಾ ಕ್ರಮಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ, ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *