Connect with us

    LATEST NEWS

    ಪಾಲಿಕೆ ಸಭೆಯಲ್ಲಿ ಗದ್ದಲಕ್ಕೆ ಕಾರಣವಾದ ಸುರತ್ಕಲ್ ವೃತ್ತ….!!

    ಮಂಗಳೂರು ಅಕ್ಟೋಬರ್ 29: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನು ಇಡುವ ವಿಚಾರ ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.


    ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇಡುವ ಪ್ರಸ್ತಾಪವನ್ನು ಈ ಹಿಂದಿನ ಪಾಲಿಕೆ ಸಭೆಯಲ್ಲಿ ಕೊನೆಯ ಕ್ಷಣದಲ್ಲಿ ಕಾರ್ಯಸೂಚಿಗೆ ಸೇರಿಸಲಾಗಿತ್ತು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಿರಲಿಲ್ಲ. ಹಾಗಾಗಿ ಇಂದಿನ ಸಭೆಯಲ್ಲಿ ಆ ನಿರ್ಣಯವನ್ನು ಸ್ಥಿರೀಕರಿಸುವ ಮುನ್ನ ಕಾಂಗ್ರೆಸ್ ಪಕ್ಷದ ಆಕ್ಷೇಪವನ್ನು ದಾಖಲಿಸಬೇಕು ಎಂದು ಪಾಲಿಕೆಯ ಪ್ರತಿಪಕ್ಷದ ನಾಯಕ ನವೀನ್ ಡಿಸೋಜಾ ಒತ್ತಾಯಿಸಿದರು.

    ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ನ ಅಬ್ದುಲ್ ರವೂಫ್, ‘ಅಭಿವೃದ್ಧಿಗೆ ಸಂಬಂಧಿಸಿದ ತುರ್ತು ವಿಚಾರಗಳನ್ನು ಮಾತ್ರ ಕೊನೆಯ ಕ್ಷಣದಲ್ಲಿ ಕಾರ್ಯಸೂಚಿಗೆ ಸೇರಿಸಿದರೆ ಒಪ್ಪಬಹುದು. ಇಂತಹ ವಿಚಾರಗಳನ್ನೆಲ್ಲ ಯಾಕೆ ಕೊನೆ ಕ್ಷಣದಲ್ಲಿ ಕಾರ್ಯ ಸೂಚಿಗೆ ಸೇರಿಸುತ್ತೀರಿ’ ಎಂದು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಪಾಲಿಕೆಯ ಆಡಳಿತ ಪಕ್ಷದ ಸಚೇತಕ ಪ್ರೇಮಾನಂದ ಶೆಟ್ಟಿ, ‘ಕಾಂಗ್ರೆಸ್ನವರು ಕಳೆದ ಸಭೆಯಲ್ಲಿ ಯಾವುದೇ ಆಕ್ಷೇಪ ದಾಖಲಿಸದೆ ಸುಮ್ಮನಿದ್ದರು. ಈಗ ಈ ವಿಷಯ ಸ್ಥಿರೀಕರಣಕ್ಕೆ ಬರುವಾಗ ಗಲಾಟೆ ಮಾಡುವುದರಲ್ಲಿ ಅರ್ಥವಿಲ್ಲ’ ಎಂದರು. ಬಿಜೆಪಿ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಅವರು, ‘ನೀವು ವಿರೋಧಿ ಮಾಡಿ, ಬಿಡಿ. ಸಾವರ್ಕರ್ ಹೆಸರನ್ನು ವೃತ್ತಕ್ಕೆ ಇಟ್ಟೇ ಇಡುತ್ತೇವೆ’ ಎಂದರು. ಆಕ್ಷೇಪ ದಾಖಲಿಸಲು ಮೇಯರ್ ಜಯಾನಂದ ಅವರು ಒಪ್ಪಂದ ಕಾರಣ, ಕಾಂಗ್ರೆಸ್ ಸದಸ್ಯರು ಮೇಯರ್ ಪೀಠದ ಎದುರು ಧರಣಿ ಆರಂಭಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply