LATEST NEWS
ವೀರ ವೆಂಕಟೇಶ ದೇವರ ಚಾತುರ್ಮಾಸ ಪ್ರಾರಂಭ
ಮಂಗಳೂರು, ಜುಲೈ 16: ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರಧಾನ ಆರಾಧ್ಯ ದೇವರಾದ ಶ್ರೀ ವೀರ ವೆಂಕಟೇಶ ದೇವರ ಹಾಗೂ ಪರಿವಾರ ದೇವರುಗಳ ಚಾತುರ್ಮಾಸ ಆಚರಣೆಗೆ ವಿಧ್ಯುಕ್ತವಾಗಿ ಇಂದು ವೈದಿಕ ವಿಧಿವಿಧಾನದೊಂದಿಗೆ ಪ್ರಾರಂಭಗೊಂಡಿತು.
ಪ್ರಾತಃ ಕಾಲ ಸಮಸ್ತ ಸಮಾಜಬಾಂಧವ ರೊಂದಿಗೆ ಶ್ರೀ ದೇವಳದ ಆಡಳಿತ ಮಂಡಳಿ ಹಾಗೂ ವಿದ್ವತ್ ವೈದಿಕರು ಶ್ರೀ ದೇವರ ಸನ್ನಿಧಾನದಲ್ಲಿ ಮಹಾಪ್ರಾರ್ಥನೆ ನಡೆಸಿ ಬಳಿಕ ಶ್ರೀ ದೇವರಿಗೆ ಪಂಚಾಮೃತ , ಗಂಗಾಭಿಷೇಕ ,ಪುಳಕಾಭಿಷೇಕ , ಪವಮಾನಾಭಿಷೇಕ ಹಾಗೂ ಶತ ಕಲಶಾಭಿಷೇಕಗಳು ಜರಗಿದವು , ಮಧ್ಯಾನಃ ಪೂಜೆ ಬಳಿಕ ಸಮಾರಾಧನೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ , ಪ್ರಧಾನ ಅರ್ಚಕರಾದ ವೇದಮೂರ್ತಿ ಹರೀಶ್ ಭಟ್ , ವೇದಮೂರ್ತಿ ಚಂದ್ರಕಾಂತ್ ಭಟ್ ತಂತ್ರಿಗಳಾದ ಪಂಡಿತ್ ಕಾಶೀನಾಥ್ ಆಚಾರ್ಯ ಉಪಸ್ಥಿತರಿದ್ದರು.
You must be logged in to post a comment Login