LATEST NEWS
ಆ ಅನಿಷ್ಟ ಕಾಂಗ್ರೇಸ್ ನಿಂದ ದೂರವಾಗಿ ಬಿಜೆಪಿಗೆ ಹೋಗಿದೆ – ವೀರಪ್ಪ ಮೊಯಿಲಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಸೆಪ್ಟೆಂಬರ್ 23: ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹಾಳಾಗುತ್ತದೆ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ, ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ, ಈಗ ಆ ಅನಿಷ್ಟ ಕಾಂಗ್ರೇಸ್ ನಿಂದ ದೂರವಾಗಿ ಬಿಜೆಪಿಗೆ ಹೋಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮೂರು ಡಿಸಿಎಂ (DCM) ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login