Connect with us

LATEST NEWS

ನಾಲ್ಕು ವಾಹನಗಳ ಸರಣಿ ಅಪಘಾತದಲ್ಲಿ ಅಪ್ಪಚ್ಚಿಯಾದ ವ್ಯಾಗನರ್ -ಡ್ರೈವರ್ ಗ್ರೇಟ್ ಎಸ್ಕೇಪ್

ಉಳ್ಳಾಲ ಸೆಪ್ಟೆಂಬರ್ 09: ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ.


ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ.ಇದರಿಂದಾಗಿ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.


ಅದೇ ವೇಳೆ ವ್ಯಾಗನರ್ ಕಾರಿನ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನ ಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ.

ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *