Connect with us

LATEST NEWS

ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ

ಬಂಟ್ವಾಳ ಜೂನ್ 12: : ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನದಷ್ಟು ಹಳೆಯದಾದ ಕಬ್ಬಿಣದ ಸೇತುವೆಯ ಮೇಲೆ ಸುರಕ್ಷತಾ ಕಾರಣಗಳಿಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.


ಈ ಆದೇಶವು ಬಂಟ್ವಾಳ ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿಗೆ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿರ್ದೇಶಿಸುತ್ತದೆ. ಈ ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಯಲ್ಲಿ ಕೆಲವೆಡೆ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ಭಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ಕೆಲ ವರ್ಷಗಳ ಹಿಂದೆಯೇ ಕಬ್ಬಿಣದ ಕಮಾನು ಅಳವಡಿಸಲಾಗಿತ್ತು. ಮಂಗಳವಾರ ಪಿಕಪ್ ವಾಹನವೊಂದು ಕಬ್ಬಿಣದ ಕಮಾನಿಗೆ ಸಿಲುಕಿಕೊಂಡ ಘಟನೆ ಮರುಕಳಿಸಿದ ಪರಿಣಾಮ ತಹಶೀಲ್ದಾರ್ ವಾಹನ ಸಂಚಾರ ಸ್ಥಗಿತಗೊಳಿಸಿ ಆದೇಶಿಸಿದ್ದಾರೆ.

ಈ ಸೇತುವೆಯ ಸಾಮರ್ಥ್ಯ ಕುರಿತು ಸಕ್ಷಮ ಇಲಾಖೆಯಿಂದ ವರದಿ ಬರುವವರೆಗೆ ಸೇತುವೆ ಮೇಲೆ ಸಂಚಾರ ಅಪಾಯಕಾರಿ ಎಂದು ಪರಿಗಣಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *