Connect with us

    FILM

    ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

    ಬೆಂಗಳೂರು, ಜನವರಿ 29: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು.ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್​ದೀಪ್ ಪುತ್ರಿ ಅಕ್ಷತಾ ಮಾಹಿತಿ ನೀಡಿದ್ದಾರೆ.

    ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 75 ವರ್ಷ ವಯಸ್ಸಾಗಿತ್ತು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

    ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply