FILM
ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ
ಬೆಂಗಳೂರು : ಕನ್ನಡ ಸಿನೆಮಾ ರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸುಮಾರು ಎರಡು ವರ್ಷಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದರು. ಸಂಜೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರು ಬಳಲಿದಂತೆ ಕಂಡುಬಂದರು. ನಮ್ಮ ಜೊತೆ ಕೆಲ ಮಾತುಗಳನ್ನಾಡಿ ಸಂಜೆ 7.30ರ ವೇಳೆಗೆ ಕೊನೆಯುಸಿರೆಳೆದರು ಎಂದು ಅವರ ಪುತ್ರ, ನಟ ಪ್ರಕಾಶ್ ಬೆಳವಾಡಿ ತಿಳಿಸಿದರು.
ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೊಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.
You must be logged in to post a comment Login