Connect with us

DAKSHINA KANNADA

ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂಬ ಭ್ರಮ ಬೇಡ – ಸುನಿಲ್.ಕೆ.ಆರ್

ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ.


ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಭಜರಂಗದಳ ಮುಖಂಡ ಸುನಿಲ್.ಕೆ.ಆರ್ ದೇಶಕ್ಕಾಗಿ ಭಜರಂಗದಳದ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ, ಭಜರಂಗದಳದ ಕಾರ್ಯಕರ್ತರು ಅತ್ಯಾಚಾರ,ದರೋಡೆ ಮಾಡಿ ರೌಡಿ ಪಟ್ಟ ಕಟ್ಟಿಕೊಂಡವರಲ್ಲ, ಗೋ ಮಾತೆ, ನಮ್ಮ ಅಕ್ಕ-ತಂಗಿಯಂದಿರ ರಕ್ಷಣೆಗಾಗಿ ಕೇಸು ಹಾಕಿಸಿಕೊಂಡವರು. ಈ ರೀತಿ. ಹೋರಾಟಗಳು ನಿರಂತರವಾಗಿ ನಡೆಯಲಿದೆ.


ಹಿಂದೂ ಕಾರ್ಯಕರ್ತರನ್ನ ಗಡಿಪಾರು ಮಾಡಿದರೆ ಹಿಂದೂ ಸಂಘಟನೆಗಳನ್ನು ವಿಚಲಿತಗೊಳಿಸಬಹುದು ಎನ್ನುವ ಭ್ರಮೆ ಬೇಡ, ಅಲ್ಪಸಂಖ್ಯಾತರ ತುಷ್ಠೀಕರಣಕ್ಕಾಗಿ ಈ ರೀತಿಯ ಕೃತ್ಯ ಮಾಡಬೇಡಿ. ನಮ್ಮ ಕಾರ್ಯಕರ್ತರನ್ನು ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂದು ಸರಕಾರ,ಪೋಲೀಸ್ ಇಲಾಖೆ ತಿಳಿದುಕೊಂಡಿದೆ, ಇದು ಯಾವತ್ತೂ ಸಾಧ್ಯವಿಲ್ಲ. ಕಾರ್ಯಕರ್ತರ ಮೇಲಿನ ಗಡಿಪಾರು ನೋಟೀಸ್ ತಕ್ಷಣ ವಾಪಾಸು ಪಡಿಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

Share Information
Advertisement
Click to comment

You must be logged in to post a comment Login

Leave a Reply