ಮಂಗಳೂರು ನವೆಂಬರ್ 19: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು,ಅದಕ್ಕೆ ಒಪ್ಪದೇ ಇದ್ದರೆ ರಂಗದಲ್ಲಿ ಪದ್ಯ ಕೊಡದೇ ಸೇಡು ತೀರಿಸುತ್ತಿದ್ದರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಪ್ರೋ ಪುರುಷೋತ್ತಮ್ ಬಿಳಿಮಲೆ ಹೇಳಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಮತ್ತು ಕಲಾವಿದರಿಗೆ ಅವಮಾನ ಮಾಡಿದ್ದಾರೆ.ಇದನ್ನು ವಿಶ್ವಹಿಂದುಪರಿಷದ್ ತೀವ್ರ ವಾಗಿ ಖಂಡಿಸುತ್ತದೆ,

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಅವರು ವಿವಾದಾತ್ಮಕವಾಗಿ ಮಾತಾನಾಡುತ್ತಾ ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲಗುತ್ತಿತ್ತು ಎಂದಿದ್ದಾರೆ.
ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು. ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ ಎಂದು
ಕರಾವಳಿ ಗಂಡುಕಲೆ ಯಕ್ಷಗಾನಕ್ಕೆ ಅವಮಾನಿಸಿದ್ದಾರೆ. ಈ ಮೂಲಕ ಹಿಂದೂ ಸಂಸ್ಕೃತಿ, ಪರಂಪರೆಯನ್ನು ಗುರಿಯಾಗಿಸಿಕೊಂಡು ಅವಮಾನಿಸಿದ್ದಾರೆ. .ಈ ಬಗ್ಗೆ ಕೇವಲ ಕ್ಷಮೆ ಕೇಳಿದರೆ ಸಾಲದು ಅವರ ಮೇಲೆ ಕೇಸು ದಾಖಲಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಹುದ್ದೆಯಿಂದ ವಜಾಗೊಳಿಸಬೇಕೆಂದು ಸರಕಾರ ಹಾಗೂ ಪೊಲೀಸ್ ಇಲಾಖೆಯನ್ನು ಅಗ್ರಹಿಸುತ್ತೇವೆ..