Connect with us

    LATEST NEWS

    ಸಂಪ್ರದಾಯ ಮುರಿದು ಮತ್ತೆ ಏಲಂ ನಡೆಸಿದರೆ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತ ಹೊಣೆ – ವಿಎಚ್ ಪಿ ಎಚ್ಚರಿಕೆ

    ಮಂಗಳೂರು ಅಕ್ಟೋಬರ್ 13: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭದಲ್ಲಿ ಅಂಗಡಿ ಏಲಂ ವಿಚಾರ ಇದೀಗ ದಿನದಿಂದ ದಿನಕ್ಕೆ ವಿವಾದತ್ತ ಸಾಗಿದೆ. ಈಗಾಗಲೇ ಏಲಂ ಪಕ್ರಿಯೆ ಪೂರ್ಣಗೊಂಡಿದ್ದು, ಇದೀಗ ಬೀದಿ ಬದಿ ವ್ಯಾಪಾರಸ್ಥರ ಸಂಘ ಮರು ಏಲಂಗೆ ಮನವಿ ಮಾಡಿರುವುದು ವಿಎಚ್ ಪಿ ಆಕ್ರೋಶಕ್ಕೆ ಕಾರಣವಾಗಿದೆ.


    ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಎಚ್ ಪಿ ಪ್ರತೀ ವರ್ಷ ನಡೆಯುವ ಜಾತ್ರಾ ಸಂಧರ್ಭದಲ್ಲಿ, ದೇವಸ್ಥಾನ ಮುಂಭಾಗ ರಸ್ತೆಯ ಎರಡು ಬದಿಯಲ್ಲಿ ಸಂತೆ ವ್ಯಾಪಾರಕ್ಕ್ಕೆ ಅಂಗಡಿಗಳನ್ನು ನೂರಾರು ವರ್ಷಗಳಿಂದ ದೇವಸ್ಥಾನವೇ ಏಲಂ ಮೂಲಕ ವ್ಯಾಪಾರಸ್ಥರಿಗೆ ನೀಡಿಕೊಂಡು ಬರುವ ಸಂಪ್ರದಾಯ. ಅದರಂತೆ ಈ ಬಾರಿಯೂ ಕೂಡ ಏಲಂ ನಡೆದು ಸುಮಾರು 80 ವ್ಯಾಪಾರಸ್ಥರು ಅಂಗಡಿ ಪಡೆದಿರುತ್ತಾರೆ.


    ಆದರೆ ಇವತ್ತು ಬೀದಿ ಬದಿ ವ್ಯಾಪಾರಸ್ಥರ ಸಂಘ ಮರು ಏಲಂ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಇದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಖಂಡಿಸುತ್ತದೆ. ಸಂಪ್ರದಾಯ ಮುರಿದು ಮರು ಏಲಂ ನಡೆಸದಂತೆ ಹಾಗು ಹೆಚ್ಚುವರಿ ಅಂಗಡಿ ನೀಡದಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡುತ್ತದೆ. ಒಂದು ವೇಳೆ ಸಂಪ್ರದಾಯ ಮುರಿದು ಮರು ಏಲಂ ನಡೆಸಿ ಅಥವಾ ಹೆಚ್ಚುವರಿ ಅಂಗಡಿ ನೀಡಿದಲ್ಲಿ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತ ಹೊಣೆ ಎಂದು ಎಚ್ಚರಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಕಟಣೆಯಲ್ಲಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply