Connect with us

LATEST NEWS

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIA ತನಿಖೆಗೆ – ವಿಶ್ವ ಹಿಂದೂ ಪರಿಷದ್ ಸ್ವಾಗತ

ಮಂಗಳೂರು ಜೂನ್ 08 : ಮೇ 1 ತಾರೀಕು ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಭಯೋತ್ಪಾದಕ ಸಂಘಟನೆ PFI ಕೈವಾಡವಿದೆ ಅದಕೋಸ್ಕರ ಈ ಪ್ರಕ್ರರಣವನ್ನNIA ತನಿಖೆಗೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಲವಾಗಿ ಆಗ್ರಹಿಸಿ ಬಜಪೆಯಲ್ಲಿ ಬ್ರಹತ್ ಜನಾಗ್ರಹ ಸಬೆ ನಡೆಸಿತ್ತು. ಇದೀಗ ಕೇಂದ್ರ ಸರಕಾರದ ಗೃಹ ಇಲಾಖೆಯು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ನೀಡಿರುವುದನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ.


ಈ ಹತ್ಯೆಯ ಹಿಂದೆ ಇರುವ ಎಲ್ಲಾ ಹಂತಕರನ್ನು ಮತ್ತು ಸಂಚುಕೋರರನ್ನು, ಹತ್ಯೆಗೆ ಹಣಕಾಸಿನ ಸಹಕಾರ ನೀಡಿದವರನ್ನು ಬಂಧಿಸಿ ಸುಹಾಸ್ ಶೆಟ್ಟಿ ಹತ್ಯೆಗೆ ನ್ಯಾಯ ಸಿಗುವ ವಿಶ್ವಾಸವಿದೆ. ಈ ಬಗ್ಗೆ ರಾಜ್ಯದ ಲಕ್ಷಾಂತರ ಹಿಂದೂಗಳು ಒಕ್ಕೊರಳಲ್ಲಿ ಆಗ್ರಹಿಸಿದ್ದು, ಇದು ಹಿಂದೂ ಸಮಾಜದ ಹೋರಾಟಕ್ಕೆ ಸಂದ ಜಯ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಕಟಣೆಯಲ್ಲಿ ತಿಳಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *